
ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಪಕ್ಷದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಂಕರ್ ಪಾಟೀಲ ಮುನೇನಕೊಪ್ಪನವರು,ಶ್ರೀ ನಾಗೇಂದ್ರ ಕಟಕೋಳ ಅವರು,ಶ್ರೀ ಮಹೇಶ ಹಾವೇರಿಯವರು,ಶ್ರೀ ಶ್ರೀಕಾಂತ ದುಂಡಿಗೌಡರು,ಶ್ರೀ ಚಂದ್ರಶೇಖರ ಪೂಜಾರ್ ಅವರು,ಶ್ರೀ ಮಲ್ಲಿಕಾರ್ಜುನ ಅಗಡಿಯವರು,ಶ್ರೀ ಮಂಜುನಾಥ ಮಾಗಡಿ ಅವರು,ಹಾಗೂ ಶ್ರೀ ರುದ್ರಗೌಡರು ಮುಂತಾದವರು ಉಪಸ್ಥಿತರಿದ್ದರು.


ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ ಅವರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ.
ಮುಖಂಡರಾದ ಶ್ರೀ ಎಚ್ ಎಸ್ ನಾಗರಾಜ್ ಅವರು ಉಪಸ್ಥಿತರಿದ್ದರು.


