ವಚನಾನಂದ ಶ್ರೀ ಗಳಿಗೆ ಉಪರಾಷ್ಟ್ರಪತಿ ಗಳಿಂದ ಸಂಸತ್ ಭವನಕ್ಕೆ ಬರುವಂತೆ ಆಹ್ವಾನ

ವಚನಾನಂದ ಶ್ರೀ ಗಳಿಗೆ ಉಪರಾಷ್ಟ್ರಪತಿ ಗಳಿಂದ ಸಂಸತ್ ಭವನಕ್ಕೆ ಬರುವಂತೆ ಆಹ್ವಾನ ಪೋನ್ ಮಾಡಿ ಓಮಿಕ್ರಾನ್ ಭೀತಿ ಕಡಿಮೆ ಆದ ಬಳಿಕ ಸಂಸತ್ ಭವನಕ್ಕೆ ಬರುವಂತೆ ಆಹ್ವಾನಿಸಿದ ಉಪರಾಷ್ಟ್ರಪತಿ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಜಗದ್ಗುರು ಪೀಠ ವಚನಾನಂದ ಶ್ರೀ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರಿಂದ ಸ್ವಾಮೀಜಿಗಳ ಯೋಗಸಾಧನೆ ಹಾಗೂ ಜಗದ್ಗುರುಪೀಠ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡು.
ಆಜಾದಿ ಅಮೃತ್ ಮಹೋತ್ಸವ ಹಿನ್ನೆಲೆ ಪಂಚಮಸಾಲಿ ಸಮಾಜದ ಕೊಡುಗೆ ಬಗ್ಗೆ ಶ್ರೀ ಗಳಿಂದ ಮಾಹಿತಿ ಪಡೆದ ಉಪರಾಷ್ಟ್ರಪತಿ.
ಹರಜಾತ್ರೆ ಮುಂದೂಡಲು ನಾಯ್ಡು ಸಲಹೆ
ಸದ್ಯ ದೇಶದಲ್ಲಿ ಓಮಿಕ್ರಾನ್ ಭೀತಿ ಹೆಚ್ಚಾಗಿದೆ. ಇದೇ ತಿಂಗಳು 14 ಮತ್ತು 15 ರಂದು ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆಯಲಿದ್ದ ಹರಜಾತ್ರೆ ಮುಂದೂಡಲು ಸಲಹೆ ನೀಡಿದ ಉಪರಾಷ್ಟ್ರಪತಿ.
ಹೆಚ್ಚು ಜನ ಸೇರುವುದರಿಂದ. ತೊಂದರೆ ಆಗುವ ಸಾದ್ಯತೆ ಇದೆ. ಓಮಿಕ್ರಾನ್ ಭೀತಿ ಕಡಿಮೆ ಆಗುವ ವರೆಗೆ ಹರಜಾತ್ರೆ ಮುಂದೂಡಲು ಶ್ರೀಗಳಿಗೆ ನಾಯ್ಡು ಸಲಹೆ.
ಹರಿಹರಕ್ಕೆ ಬರಲಿರುವ ವೆಂಕಯ್ಯ ನಾಯ್ಡು
ಓಮಿಕ್ರಾನ್ ಭೀತಿ ಕಡಿಮೆ ಆದ ಬಳಿಕ ಹರಜಾತ್ರೆಯಲ್ಲಿ ಪಾಲ್ಗೊಳ್ಳಲು ಹರಿಹರಕ್ಕೆ ಬರುವುದಾಗಿ ಶ್ರೀ ಗಳಿಗೆ ಹೇಳಿದ ನಾಯ್ಡು.
ಪಂಚಮಸಾಲಿ ಸಮಾಜ ಹಾಗೂ ಐತಿಹಾಸಿಕ ಹಿನ್ನೆಲೆ ಬಗ್ಗೆ ವಚನಾನಂದ ಶ್ರೀಗಳಿಂದ ಮಾಹಿತಿ ಪಡೆದ ವೆಂಕಯ್ಯ ನಾಯ್ಡು.
ಬೆಳವಡಿ ಮಲ್ಲಮ್ಮ, ಕೆಳದಿ ಚನ್ನಮ್ಮ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಹೀಗೆ ಪಂಚಮಸಾಲಿ ಸಮಾಜದ ವೀರ ಮಹಿಳೆಯ ಬಗ್ಗೆ ಮಾಹಿತಿ ನೀಡಿದ ಸ್ವಾಮೀಜಿ.
ರಾಜ್ಯದಲ್ಲಿ 85ಲಕ್ಷ ಹಾಗೂ ಮಹಾರಾಷ್ಟ್ರ,ತೆಲಂಗಾಣ,ಆಂದ್ರಪ್ರದೇಶ,ತಮಿಳುನಾಡು ಸೇರಿದಂತೆ ದೇಶದಲ್ಲಿ ಒಂದು ಕೋಟಿ 50 ಲಕ್ಷ ಪಂಚಮಸಾಲಿಗಳಿದ್ದಾರೆ ಎಂದು ಉಪರಾಷ್ಟ್ರ ಪತಿಗಳಿಗೆ ಮಾಹಿತಿ ನೀಡಿದ ವಚನಾನಂದ ಶ್ರೀ.
ಓಮಿಕ್ರಾನ್ ಭೀತಿ ಕಡಿಮೆ ಆದ ಬಳಿದ ನಿಗದಿತ ಸಮಯಕ್ಕೆ ಹರ ಜಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಶ್ರೀಗಳಿಗೆ ಹೇಳಿದ ಉಪರಾಷ್ಟ್ರಪತಿ.
ಇದೇ ತಿಂಗಳ 14 ಮತ್ತು 15 ರಂದು ಹರಿಹರದ ಹರಕ್ಷೇತ್ರ ಪಂಚಮಸಾಲಿ ಜಗದ್ಗುರು ಪೀಠ ನಡೆಯಲಿದ್ದ ಹರಜಾತ್ರೆ.
ಹರಜಾತ್ರೆ ಗೆ ಆಹ್ವಾನ ನೀಡಿ ಪತ್ರ ತಲುಪಿದ ಹಿನ್ನೆಲೆ ವಚನಾನಂದ ಶ್ರೀಗಳಿಗೆ ಪೋನ್ ಕರೆ ಮಾತನಾಡಿ ಉಪರಾಷ್ಟ್ರಪತಿ.
ಜ.14, 15 ರಂದು ಆಯೋಜಿಸಿದ್ದ ಹರ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ

ಹರಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಜ. 14, 15 ರಂದು ಆಯೋಜಿಸಿದ್ದ ಹರ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ
ಹರಿಹರ ಗುರುಪೀಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ರಾಜ್ಯ ಹಾಗೂ ದೇಶದಲ್ಲಿ ಓಮಿಕ್ರಾನ್ ಭೀತಿ ಜತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ನಿಯಾವಳಿ ಪಾಲನೆ ಹಾಗೂ ಜನತೆಯ ಆರೋಗ್ಯದ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಂದೂಡುವ ತೀರ್ಮಾನವನ್ನು ಇಂದು ಗುರುಪೀಠದಲ್ಲಿ ನಡೆದ ಸಮುದಾಯದ ಮುಖಂಡ ಸಭೆ ಕೈಗೊಂಡಿದೆ ಎಂದು ತಿಳಿಸಿದರು.
ಹರಿಹರ ಪೀಠದ ನಮ್ಮ ಹರಕ್ಷೇತ್ರದಲ್ಲಿ ಹರಜಾತ್ರೆ ಆಯೋಜಿಸುತ್ತಾ ಬರಲಾಗಿದೆ. ಆದರೆ ಓಮಿಕ್ರಾನ್ ಭೀತಿ ಹೆಚ್ಚಿದೆ, ಸರಕಾರ ಕೂಡ ಹಲವು ನಿಯಮಾವಳಿ ರೂಪಿಸಿ ನಿಬರ್ಂಧ ಹೇರಿದೆ. ನಮ್ಮ ಪೀಠ ಸರಕಾರದ ಜತೆ ಮತ್ತು ಜನರ ಜತೆ ಇರಲಿದೆ. ಹಾಗಾಗಿ ತಾತ್ಕಾಲಿಕ ಮುಂದೂಡಿಕೆಯ ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ಸೋಂಕಿನ ಹಾವಳಿ ಕಡಿಮೆಯಾದ ನಂತರ ಮುಂದಿನ ಹರಜಾತ್ರೆಯ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದರು.
ಜಾತ್ರೆ ಎಂದರೆ ನೂರಾರು ವರ್ಷಗಳ ಇತಿಹಾಸವಿರುವ ಮಠಗಳಲ್ಲಿ ನಡೆಯುವ ತೇರು, ರಥೋತ್ಸವದ ಮಾದರಿ ನಮ್ಮ ಹರಜಾತ್ರೆಯಲ್ಲಿ ಇರುವುದಿಲ್ಲ.ಭಕ್ತರು, ಸಮುದಾಯವನ್ನು ಒಗ್ಗೂಡಿಸಲು ಜಾತ್ರೆ ಪದವನ್ನು ಮಾತ್ರೆ ತೆಗೆದುಕೊಂಡಿದ್ದೇವೆ. ಸಮಕಾಲೀನ ವಿಷಯಗಳ ಚರ್ಚೆ ಹರಜಾತ್ರೆಯಲ್ಲಿ ನಡೆಯಲಿದೆ. ಈ ಬಾರಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಉದ್ಯೋಗ ನೀಡುವವರು ಮತ್ತು ಪಡೆಯುವವರ ಸೇರಿ ಉದ್ಯೋಗ ಮೇಳ ಹೀಗೆ ಹಲವು ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ತಿಳಿಸಿದರು.
ಹರಮಾಲೆ ಸಂಕಲ್ಪ ಸಮರ್ಪಣೆ
ಹರಜಾತ್ರೆ ಹಿನ್ನೆಲೆ ಹರಮಾಲೆ ಅಯೋಜಿಸಲಾಗಿತ್ತು, ಹಲವಾರು ಜನ 21 ದಿನದ ಹಿಂದೆ ಹರಮಾಲೆ ಧರಿಸಿದ್ದರು. ಜ. 14 ರಂದು ಇಲ್ಲಿಗೆ ಆಗಮಿಸುವ ಮಾಲಾಧಾರಿಗಳು ‘ಹರಮಾಲೆ ಸಂಕಲ್ಪ ಸಮರ್ಪಣೆ’ ಮಾಡಲಾಗುತ್ತಿತ್ತು. ಜಾತ್ರೆ ಮುಂದೂಡಿರುವುದರಿಂದ ಮಾಲಾಧಾರಿಗಳು ಅವರವರ ಮನೆಯಲ್ಲಿಯೇ ಹರಮಾಲೆ ಸಂಕಲ್ಪ ಸಮರ್ಪಣೆ ಮಾಡಬೇಕು. ಇನ್ಮುಂದೆ ರುದ್ರಾಕ್ಷಿ ಮಾಲೆ ತೊಟ್ಟು ಪ್ರತಿದಿನ ಹರಮಂತ್ರ ಪಠಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.
ಹರಜಾತ್ರೆ ಆಹ್ವಾನ ಪತ್ರಿಕೆ ನೋಡಿದ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬಳಿ ಮಠ, ಪಂಚಮಸಾಲಿ ಸಮಾಜ ಹಾಗೂ ನಮ್ಮ ಯೋಗದ ಬಗ್ಗೆ ಮಾಹಿತಿ ಪಡೆದು ಕರೆ ಮಾಡಿದ್ದರು. ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಸಂಸತ್ ಭವನಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ನಾವು ಅವರಿಗೆ ನಮ್ಮ ಸಮಾಜದ ಬೆಳವಡಿ ರಾಣಿ ಮಲ್ಲಮ್ಮ ಕೆಳದಿ ರಾಣಿ ಚೆನ್ನಮ್ಮ, ಕಿತ್ತೂರು ರಾಣಿ ಚನ್ನಮ್ಮ,ದಂಡಿ ಸತ್ಯಾಗ್ರಹದಲ್ಲಿ ಮಹಾತ್ಮಾಗಾಂಧೀಜಿ ಜತೆಯಲ್ಲಿದ್ದ ನಮ್ಮ ಮೈಲಾರ ಮಹಾದೇವ ಇವರೆಲ್ಲಾ ಪಂಚಮಸಾಲಿ ಸಮಾಜದವರು, ದೇಶಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ತಾವು ಮಾಹಿತಿ ನೀಡಿದೆ. ಹರಜಾತ್ರೆ ಮುಂದೂಡಲು ಅವರು ಸಲಹೆ ನೀಡಿದರು, ಮುಂದಿನ ಜಾತ್ರೆಯಲ್ಲಿ ತಾವು ಪಾಲ್ಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶ್ರೀಗಳು ತಿಳಿಸಿದರು.
ಸಮಾಜದ ಮುಖಂಡರಾದ ಬಿ.ಸಿ. ಉಮಾಪತಿ, ನಾಗನಗೌಡ್ರು,ಪಿ ಡಿ ಶಿರೂರ, ಚಂದ್ರಶೇಖರ ಪೂಜಾರ,ಸೋಮನಗೌಡ ಪಾಟೀಲ,ಮಹೇಶ ಹಾವೇರಿ,ಪ್ರಕಾಶ್ ಪಾಟೀಲ,ಬಸವನಗೌಡ್ರು ತೊಂಡಿಹಾಳ, ಶ್ರೀಮತಿ ವಸಂತಾ ಹುಲ್ಲತ್ತಿ,ಸುನಂದಮ್ಮ,ಗೀತಮ್ಮ ಇತರರು ಇದ್ದರು.
ಪ್ರವರ್ಗ 2 (ಎ) ಮತ್ತು ಓಬಿಸಿ ಮೀಸಲಾತಿ ಪಡೆಯಲು ಪಂಚಮಸಾಲಿ ಸಮುದಾಯಕ್ಕೆ ಎಲ್ಲಾ ಅರ್ಹತೆಯಿದೆ: ವಚನಾನಂದ ಸ್ವಾಮೀಜಿಗಳು ವಿಕಾಸಸೌಧದಲ್ಲಿ ಮೀಸಲಾತಿ ಪರಾಮರ್ಶಿಸುವ ಉನ್ನತ ಮಟ್ಟದ ಸಮಿತಿಯ ಮುಂದೆವಾದ

ಪ್ರವರ್ಗ 2 (ಎ) ಮತ್ತು ಓಬಿಸಿ ಮೀಸಲಾತಿ ಪಡೆಯಲು ಪಂಚಮಸಾಲಿ ಸಮುದಾಯಕ್ಕೆ ಎಲ್ಲಾ ಅರ್ಹತೆಯಿದೆ: ವಚನಾನಂದ ಸ್ವಾಮೀಜಿಗಳು
ವಿಕಾಸಸೌಧದಲ್ಲಿ ಮೀಸಲಾತಿ ಪರಾಮರ್ಶಿಸುವ ಉನ್ನತ ಮಟ್ಟದ ಸಮಿತಿಯ ಮುಂದೆ ವಾದ
-ಪಂಚಮಸಾಲಿ ಮಠಾಧೀಶರ ಒಕ್ಕೂಟದ ಷ ಬ್ರ ಡಾ.ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು, ಬಬಲೇಶ್ವರ, ಶ್ರೀ ಷ ಬ್ರ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ,ಮನಗೂಳಿ ಹಾಗೂ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಇನ್ನಿತರ ಮಠಾಧೀಶರುಗಳು ಭಾಗಿ
-ಪಂಚಮಸಾಲಿ ಸಮಾಜದ ಹಿರಿಯರನ್ನ ಒಳಗೊಂಡ ನಿಯೋಗ ಕಚೇರಿಗೆ ಭೇಟಿ
-ವಕೀಲರಾದ ಶ್ರೀ. ಬಿ.ಎಸ್ ಪಾಟೀಲರಿಂದ ದಾಖಲೆಗಳ ಸಮರ್ಪಣೆ
ಬೆಂಗಳೂರು ಡಿಸೆಂಬರ್ 06: ರಾಜ್ಯದ ಪ್ರಮುಖ ಕೃಷಿಕ ಸಮುದಾಯವಾದ ಪಂಚಮಸಾಲಿ ಸಮುದಾಯ, ಪ್ರವರ್ಗ 2 (ಎ) ಹಾಗೂ ಓಬಿಸಿ ಮೀಸಲಾತಿ ಪಡೆಯಲು ಎಲ್ಲಾ ರೀತಿಯ ಅರ್ಹತೆಗಳನ್ನು ಹೊಂದಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀ ಸುಭಾಷ್ ಆಡಿ ಅವರ ನೇತೃತ್ವದ ಸಮಿತಿ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದು ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಭರವಸೆ ವ್ಯಕ್ತಪಡಿಸಿದರು.
ಸೋಮವಾರ ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 7 ರಲ್ಲಿ ನಿವೃತ್ತ ನ್ಯಾಯಮೂರ್ತಿ ಶ್ರೀ ಸುಭಾಷ್ ಅಡಿ ಅವರ ಮೀಸಲಾತಿ ಪರಮಾರ್ಶಿಸುವ ಉನ್ನತ ಮಟ್ಟದ ಸಮಿತಿಯ ಮುಂದೆ ಸಮರ್ಥವಾದ ಮಂಡಿಸಿ ಪತ್ರಕರ್ತರೊಂದಿಗೆ ಮಾತನಾಡಿದರು. ಇಂದು ನಿವೃತ್ತ ನ್ಯಾಯಮೂರ್ತಿ ಶ್ರೀ ಸುಭಾಷ್ ಅಡಿ ಅವರ ಮೀಸಲಾತಿ ಪರಾಮರ್ಶಿಸುವ ಉನ್ನತ ಸಮಿತಿ ನಮ್ಮ ವಾದವನ್ನು ಮಂಡಿಸುವಂತೆ ಆಹ್ವಾನ ನೀಡಿತ್ತು. ಈ ನಿಟ್ಟಿನಲ್ಲಿ ರಾಜ್ಯದ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಮಠಾಧೀಶರುಗಳು, ಬಬಲೇಶ್ವರದ ಶ್ರೀ ಷ ಬ್ರ ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು, ಮನಗೂಳಿಯ ಶ್ರೀ ಷ ಬ್ರ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಪಂಚಮಸಾಲಿ ಸಮುದಾಯದ ಹಿರಿಯರು ನೇತೃತ್ವದ ನಿಯೋಗ ಇಂದು ಭೇಟಿ ನೀಡಿ ನಮ್ಮ ವಾದ ಹಾಗೂ ಸೂಕ್ತ ದಾಖಲೆಗಳನ್ನು ಆಯೋಗಕ್ಕೆ ಸಲ್ಲಿಸಿದ್ದೇವೆ.

ಪ್ರಮುಖ ಕೃಷಿಕ ಸಮುದಾಯ ಆಗಿರುವ ಪಂಚಮಸಾಲಿಗಳಿಗೆ ಯಾವುದೇ ಮೀಸಲಾತಿ ಸಿಕ್ಕಿಲ್ಲ. ಲಿಂಗಾಯತ ಸಮುದಾಯದ ಇತರೆ ಉಪಪಂಗಡಗಳಿಗೆ ಮೀಸಲಾತಿಯನ್ನು ನೀಡಲಾಗಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಪ್ರವರ್ಗ 2 (ಎ) ನಲ್ಲಿ ಅಥವಾ ಇತ್ತೀಚೆಗೆ ರಾಜ್ಯ ಸರಕಾರಗಳಿಗೆ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಅಧಿಕಾರವನ್ನು ಬಳಸಿಕೊಂಡು ಓಬಿಸಿ ಮೀಸಲಾತಿಯನ್ನ ನೀಡಬೇಕು ಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಸಮಿತಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ವಚನಾನಂದ ಸ್ವಾಮೀಜಿಗಳು ತಿಳಿಸಿದರು.
ಹಿರಿಯ ವಕೀಲರಾದ ಬಿ.ಎಸ್ ಪಾಟೀಲ್ ಮಾತನಾಡಿ, 1871 ರಿಂದ ಇಲ್ಲಿಯವರೆಗಿನ ಸುಮಾರು 35 ಕ್ಕೂ ಹೆಚ್ಚು ದಾಖಲೆಗಳನ್ನು ನಾವು ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದ ಸಮಿತಿಗೆ ನೀಡಿದ್ದೇವೆ. ಹಲವಾರು ದಶಕಗಳ ಬೇಡಿಕೆಯ ಫಲವಾಗಿ ಸರಕಾರ ಇಂದು ಸಮಿತಿಯನ್ನು ರಚನೆ ಮಾಡಿದೆ. ಅಲ್ಲದೆ, ಕೇಂದ್ರ ಸರಕಾರದ ಓಬಿಸಿ ಪಟ್ಟಿಗೆ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಗೊಳಿಸುವಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಓಬಿಸಿ ಪಟ್ಟಿಗೆ ಸೇರ್ಪಡೆಯ ಅಧಿಕಾರವನ್ನು ರಾಜ್ಯಗಳಿಗೆ ನೀಡಿದೆ. ಈ ನಿಟ್ಟಿನಲ್ಲಿ ನಮ್ಮ ಅರ್ಜಿಗಳು ರಾಜ್ಯಸರಕಾರಕ್ಕೆ ವರ್ಗಾವಣೆ ಆಗಿದ್ದು ಓಬಿಸಿ ಮೀಸಲಾತಿ ಸಿಗುವ ವಿಶ್ವಾಸ ಹೊಂದಿದ್ದೇವೆ ಎಂದು ಹೇಳಿದರು.
ಗಮನ ಸೆಳೆದ ಪಂಚಮಸಾಲಿ ಮಠಾಧೀಶರುಗಳ ಉಪಸ್ಥಿತಿ:
ರಾಜ್ಯದ ಪಂಚಮಸಾಲಿ ಸಮುದಾಯವನ್ನು ಪ್ರತಿನಿಧಿಸುವ ಸುಮಾರು 15 ಕ್ಕೂ ಹೆಚ್ಚು ಸ್ವಾಮೀಜಿಗಳು ನಿಯೋಗದಲ್ಲಿ ಪಾಲ್ಗೊಂಡಿದ್ದರು. ಪ್ರಮುಖವಾಗಿ, ಷ ಬ್ರ ಡಾ.ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು, ಬಬಲೇಶ್ವರ, ಶ್ರೀ ಷ ಬ್ರ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ, ಮನಗೂಳಿ,ಶ್ರೀ ಬಸವರಾಜ ದಿಂಡೂರ,ಶ್ರೀ ಸೋಮನಗೌಡ ಪಾಟೀಲ,ಶ್ರೀ ಚಂದ್ರಶೇಖರ ಪೂಜಾರ,ಶ್ರೀಮತಿ ವಸಂತ ಹುಲ್ಲತ್ತಿ ಸಭೆಯಲ್ಲಿ ಉಪಸ್ಥಿತರಿದ್ದರು. ಒಗ್ಗಟ್ಟಿನಲ್ಲಿ ತಮ್ಮ ವಾದವನ್ನು ಮಂಡಿಸಿದ್ದು ಎಲ್ಲರ ಗಮನ ಸೆಳೆಯಿತು.
ಶಿಗ್ಗಾವಿಯಲ್ಲಿ ಪಂಚಮಸಾಲಿ ಸಮುದಾಯ ಭವನದ ಅಡಿಗಲ್ಲು ಸಮಾರಂಭ

ಶಿಗ್ಗಾವಿಯಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯಸಾನಿಧ್ಯದಲ್ಲಿ ಕರ್ನಾಟಕ ಘನಸರ್ಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರು ಪಂಚಮಸಾಲಿ ಸಮುದಾಯ ಭವನದ ಅಡಿಗಲ್ಲು ಹಾಕಿದರು.
In the presence of Jagadguru Sri Sri Sri Vachananand Swamiji, Panchamasali Jagadguru Peetha,Harihar Chief Minister Of Karnataka Sri Basavaraj Bommai lays foundation stone for Panchamasali Convention Centre in Shiggaon.
----------------------------------------------
